ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ಮಗುವಿಗೆ ಒಂದು ಗ್ರಾಂ ಚಿನ್ನದ ಉಂಗುರವನ್ನು ನೀಡುವ ಯೋಜನೆ ಘೋಷಣೆ.

ಚೆನ್ನೈ, ಆ.05: ತಮಿಳುನಾಡು ವಿಧಾನಸಭೆಯಲ್ಲಿ ಹಣಕಾಸು ಸಚಿವ ಮಾರಿ ವಿಲ್ಸನ್ ಬಜೆಟ್ ಮಂಡಿಸಿದ್ದು, ಬಜೆಟ್ನಲ್ಲಿ ಬಂಪರ್ ಯೋಜನೆ ಘೋಷಿಸಿದ್ದಾರೆ. ಇದು ಟಿವಿಕೆ ಸರ್ಕಾರದ ಮೊದಲ ಆಯವ್ಯಯ ಮಂಡನೆಯಾಗಿದ್ದು, ಮಹಿಳೆಯರು ಹಾಗೂ ಯುವಜನತೆಗೆ ಗಮನಾರ್ಹ ಕೊಡುಗೆಗಳನ್ನು ಘೋಷಿಸಿದ್ದಾರೆ.
ಬಜೆಟ್ನಲ್ಲಿ ಘೋಷಿಸಲಾದ ಪ್ರಮುಖ ಯೋಜನೆಗಳಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ಮಗುವಿಗೆ ಒಂದು ಗ್ರಾಂ ಚಿನ್ನದ ಉಂಗುರವನ್ನು ನೀಡುವ ಯೋಜನೆಯು ಸೇರಿದೆ. ಇದು ನವಜಾತ ಶಿಶುಗಳ ಕುಟುಂಬಗಳಿಗೆ ಪ್ರೋತ್ಸಾಹ ನೀಡುವ ಗುರಿ ಹೊಂದಿದೆ. ಇದಲ್ಲದೆ, ಮದುವೆಯಾಗುವ ಹೆಣ್ಣುಮಕ್ಕಳಿಗಾಗಿ ವಿಶೇಷ ಯೋಜನೆಯನ್ನು ಪರಿಚಯಿಸಲಾಗಿದೆ. ಈ ಯೋಜನೆಯಡಿ, ಪ್ರತಿ ಹೆಣ್ಣು ಮಗಳಿಗೆ ಎಂಟು ಗ್ರಾಂ ಚಿನ್ನದ ನಾಣ್ಯ ಮತ್ತು ಒಂದು ಸೀರೆಯನ್ನು ಉಡುಗೊರೆಯಾಗಿ ನೀಡಲಾಗುತ್ತದೆ.
ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕ ಸಬಲೀಕರಣವನ್ನು ಉತ್ತೇಜಿಸುವ ದೃಷ್ಟಿಯಿಂದ, ಉಚಿತವಾಗಿ ಐದು ಮೇಕೆಗಳು ಮತ್ತು ಹಾಲು ನೀಡುವ ಒಂದು ಹಸುವನ್ನು ಒದಗಿಸುವ ಯೋಜನೆಯನ್ನು ಸಹ ಬಜೆಟ್ನಲ್ಲಿ ಸೇರಿಸಲಾಗಿದೆ.
